ಕನ್ನಡ ವಿರೋಧಿ ಹೇಳಿಕೆ ನೀಡಿಲ್ಲ: ರಮೇಶ್ ಜಾರಕಿಹೊಳಿ ಸ್ಪಷ್ಟನೆ
ಬೆಳಗಾವಿ ಗಡಿ ವಿವಾದ
ಬೆಳಗಾವಿ, ಜ.2: ಬೆಳಗಾವಿಯ ಗ್ರಾಮೀಣ ಕ್ಷೇತ್ರ ಮರಾಠಿಗರ ಸೊತ್ತು ಎಂದು ಹೇಳಿಕೆ ನೀಡಿದ್ದ ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ, ಈಗ ಕನ್ನಡ ವಿರೋಧಿ ಹೇಳಿಕೆಯನ್ನು ನಾನು ನೀಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚಿ ನನ್ನ ವಿರುದ್ಧ ಷಡ್ಯಂತ್ರಗಳನ್ನು ರೂಪಿಸಲಾಗುತ್ತಿದೆ. ಗಡಿ ವಿಷಯಕ್ಕೆ ಸಂಬಂಧಿಸಿದಂತೆ ನಾನು ನೂರಕ್ಕೆ ನೂರರಷ್ಟು ಕನ್ನಡಿಗರ ಜೊತೆಗಿದ್ದೇನೆ. ನಾನು ಕನ್ನಡ ವಿರೋಧಿ ಹೇಳಿಕೆ ನೀಡಿದ್ದರೆ ಶಾಸಕ ಸ್ಥಾನದಲ್ಲಿರಲು ನಾಲಾಯಕ್ ಎಂದು ತಿಳಿಸಿದ್ದಾರೆ.
Next Story