ಕಾಡಾನೆ ದಾಳಿ: ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ಗಾಯ
ಸಿದ್ದಾಪುರ, ಜ.3: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಇಲ್ಲಿಗೆ ಸಮೀಪದ ಇಂಜಿ ಲಗೆರೆ ಬಳಿ ಗ್ರಾಮದಲ್ಲಿ ನಡೆದಿದೆ.
ಕಾರ್ಮಿಕ ಮಣಿ ಎಂಬವರ ಪುತ್ರಿಯರಾದ ಯುವಶ್ರೀ ಹಾಗೂ ನಿತ್ಯಶ್ರೀ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂಜಲಗೆರೆ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿ ನಿತ್ಯಶ್ರೀ ಹಾಗೂ 2 ನೇ ತರಗತಿಯಲ್ಲಿ ಓದುತ್ತಿರುವ ಯುವಶ್ರೀ ಅಕ್ಕ ತಂಗಿಯರು. ಇವರು ಎಂದಿನಂತೆ ಕಾಫಿ ತೋಟದ ಮಾರ್ಗವಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ಹಠಾತ್ತಾಗಿ ನುಗ್ಗಿ ಬಂದ ಕಾಡಾನೆಯೊಂದು ದಾಳಿ ಮಾಡಿದೆ. ಇದರಿಂದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಜೊತೆಯಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವೇಳೆ ಕಾರ್ಮಿಕರು ಬೊಬ್ಬೆ ಹಾಕಿದಾಗ ಕಾಡಾನೆ ಅಲ್ಲಿಂದ ಕಾಫಿ ತೋಟದೊಳಗಿನ ನುಗ್ಗಿ ಮರೆಯಾಯಿತು.
Next Story