ಪೌರತ್ವ ಕಾಯ್ದೆ ಬಗ್ಗೆ ಬಿಜೆಪಿ ವತಿಯಿಂದ ಮನೆ ಮನೆ ಪ್ರಚಾರ: ಸ್ಥಳೀಯರಿಂದ ವಿರೋಧ
ದಾವಣಗೆರೆ: ಇಲ್ಲಿನ ಎಸ್ಒಜಿ ಕಾಲೋನಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆ ಪ್ರಚಾರ ಕಾರ್ಯಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಘಟನೆ ಶುಕ್ರವಾರ ನಡೆದಿದೆ.
ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್ ಶಿವಯೋಗಿಸ್ವಾಮಿಯವರೊಂದಿಗೆ ಕಾಂಗ್ರೆಸ್ ನ ಪಾಲಿಕೆ ಸದಸ್ಯ ನಾಗರಾಜ್ ಸೇರಿದಂತೆ ಸ್ಥಳೀಯರಾದ ಆಟೋ ತಿಮ್ಮಣ್ಣ, ಕಲ್ಲೇಶ್, ವೆಂಕಟೇಶ್ ಇನ್ನಿತರರು ತಡೆಯೊಡ್ಡಿದ್ದಾರೆ. ಅಲ್ಲದೇ ನಮ್ಮಲ್ಲಿ ಹಿಂದು ಮುಸ್ಲಿಂ ಎಂಬ ಬೇಧಭಾವವಿಲ್ಲ ನಾವೆಲ್ಲ ಏಕ ಭಾವನೆಯಿಂದ ಒಗ್ಗಟ್ಟಾಗಿದ್ದೇವೆ ಎಂದಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದೆ ಎನ್ನಲಾಗಿದೆ.
Next Story