ಭೀಕರ ರಸ್ತೆ ಅಪಘಾತ: ಮೂವರು ಬೈಕ್ ಸವಾರರು ಮೃತ್ಯು
ಕಲಬುರಗಿ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ನಡೆದಿದೆ.
ರಾಜಕುಮಾರ್ ಖಂಡೇಕರ್ (24) ಗುಂಡಪ್ಪಾ ಮಾನೆ (20) ಮತ್ತು ಮಹಾದೇವಪ್ಪಾ ಸಾಲೆಗಾಂವ್ (30) ಮೃತರು ಎಂದು ತಿಳಿದು ಬಂದಿದೆ.
ಇವರು ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದವರು ಎನ್ನಲಾಗಿದ್ದು, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ವಾಪಸ್ ಒಂದೇ ಬೈಕ್ ನಲ್ಲಿ ಮೂವರು ಊರಿಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story