"ರೈತರ ವಿರುದ್ಧ ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧ ಕ್ರಮ"
ಮಹದಾಯಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ಬೆಂಗಳೂರು, ಜ.31: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಧಾರವಾಡದ ನವಲಗುಂದದಲ್ಲಿ ನಡೆದ ಪ್ರತಿಭಟನೆ ವೇಳೆ ರೈತರ ವಿರುದ್ಧ ದೌರ್ಜನ್ಯ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಪೊಲೀಸ್ ಅಧಿಕಾರಿ ಕಮಲ್ ಪಂತ್ ಅವರ ವರದಿ ಆಧರಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರಕಾರ ಪೀಠಕ್ಕೆ ತಿಳಿಸಿತು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.
Next Story