ಸಾಗರ: ಕಾರು- ಲಾರಿ ಮುಖಾಮುಖಿ ಢಿಕ್ಕಿ; ಆರು ಮಂದಿಗೆ ಗಾಯ
ಸಾಗರ, ಫೆ.15: ಟವೆರಾ ಕಾರು ಮತ್ತು ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ತಾಲೂಕಿನ ತಾಳಗುಪ್ಪ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಾನ್ಲೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಅಪಘಾತದ ತೀವ್ರತೆಗೆ ಕಾರು ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದವರು ತುಮಕೂರು ಮೂಲದವರೆಂದು ಹೇಳಲಾಗಿದೆ.
Next Story