ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ನೆರವು : ವಿಧಾನ ಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು
ಬೆಂಗಳೂರು, ಫೆ.17: ವಿಧಾನ ಸಭೆಯ ಅಧಿವೇಶನ ಸೋಮವಾರ ಬೆಳಗ್ಗೆ ಆರಂಭಗೊಂಡಿದ್ದು, ಜಂಟಿ ಸದನವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ವಜೂಭಾಯ್ ವಾಲಾ ಅವರು ಈ ಬಾರಿ ರಾಜ್ಯದಲ್ಲಿ ನೆರೆಯಿಂದ ಭಾರೀ ಹಾನಿಯಾಗಿತ್ತು. ನೆರೆಯಿಂದ ತೊಂದರೆಗೊಳಗಾದವರಿಗೆ ಕೇಂದ್ರ ಸರಕಾರದ ನೆರವಿನೊಂದಿಗೆ ಪರಿಹಾರ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸಲಾಗಿದೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ನೆರವು ನೀಡಲಾಗಿದೆ.
ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ ಕೃಷಿ ನೆರವು ನೀಡಲಾಗಿದೆ ಎಂದು ರಾಜ್ಯಪಾಲರು ತಿಳಿಸಿದರು.
ಆರು ಲಕ್ಷಕ್ಕೂ ಹೆಚ್ಚು ರೈತರಿಗೆ ಸಬ್ಸಿಡಿ ನೀಡಲಾಗಿದೆ. ರೈತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ, ಸಹಕಾರಿ ಬ್ಯಾಂಕ್ಗಳಲ್ಲಿ ರೈತರ ಸಾಲ ಮನ್ನಾ, ಕೃಷಿ ಸಾಲ ಮನ್ನಾ, ಮನ್ರೇಗಾ ಯೋಜನೆಯಡಿ ಕೆಲಸ 100 ದಿನದಿಂದ 150 ದಿನಕ್ಕೆ ವಿಸ್ತರಣೆ, ಹಾಲು ಉತ್ಪಾದಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ 5 ರೂ ಹೆಚ್ಚಳ, ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 4,000 ರೂ ಧನಸಹಾಯ ನೀಡುತ್ತಿರುವುದನ್ನು ರಾಜ್ಯಪಾಲರು ತಮ್ಮ ಭಾಷಣದಲ್ಲಿ ತಿಳಿಸಿದರು.
ಹಾಲು ಉತ್ಪಾದನೆಯಲ್ಲಿ ಕರ್ನಾಟಕ 2ನೇ ಸ್ಥಾನ, ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ ಎಂದರು