ಕರ್ತವ್ಯ ನಿರ್ವಹಿಸದ ವೈದ್ಯಾಧಿಕಾರಿಗಳ ಅಮಾನತ್ತಿಗೆ ಸಚಿವ ಬಿ.ಸಿ.ಪಾಟೀಲ್ ಸೂಚನೆ
ಹಾವೇರಿ, ಮಾ. 28: ಕೊರೊನಾ ಸೋಂಕು ಪಸರಿಸುತ್ತಿರುವ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ನಿಯಮಾವಳಿಗಳ ಪ್ರಕಾರ ಕರ್ತವ್ಯ ನಿರ್ವಹಿಸಬೇಕೆಂದು ಸರ್ಕಾರ ಸೂಚಿಸಿದೆ. ಆದರೂ ಸಹ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡಾ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಾತ್ರ ನಿರ್ಲಕ್ಷ್ಯ ಭಾವ ತೋರಿದ್ದಾರೆನ್ನಲಾಗಿದ್ದು, ಕೊರೊನಾ ಸೋಂಕಿನಂತಹ ಪರಿಸ್ಥಿತಿಯಲ್ಲಿ ಜನರಿಗೆ ಚಿಕಿತ್ಸೆ ನೀಡಬೇಕಾಗಿದ್ದ ವೈದ್ಯರು ಕರ್ತವ್ಯಕ್ಕೆ ಹಾಜರಾಗದೇ ಗೈರಾಗಿದ್ದನ್ನು ಗಮನಿಸಿದ ಸಚಿವ ಬಿ.ಸಿ.ಪಾಟೀಲ್ ಕೆಂಡಾಮಂಡಲವಾಗಿದ್ದಾರೆ.
ಶನಿವಾರ ಕೋಡಾ ಸರ್ಕಾರಿ ಆಸ್ಪತ್ರೆಗೆ ಸಚಿವರು ಭೇಟಿ ನೀಡಿದಂತಹ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸದೇ ಗೈರಾಗಿದ್ದಂತಹ ಇಬ್ಬರು ವೈದ್ಯರನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಈ ಸಂದರ್ಭ ತಹಶೀಲ್ದಾರ್ ಆರ್.ಎಚ್.ಭಾಗವಾನ, ಸಿಪಿಐ ಮಂಜುನಾಥ ಪಂಡಿತ್ ಉಪಸ್ಥಿತರಿದ್ದರು.
Next Story