ಸಂಸದರ ನಿಧಿಯಿಂದ ಒಂದು ಕೋಟಿ ರೂ. ನೀಡಿದ ಸಂಸದೆ ಸುಮಲತಾ
ಬೆಂಗಳೂರು, ಮಾ.30: ಕೊರೋನ ಸೋಂಕಿನ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಸಂಸದೆ ಸುಮಲತಾ ಅಂಬರೀಶ್, ತಮ್ಮ ಸಂಸದರ ಪ್ರದೇಶಾಭಿವೃದ್ದಿ ನಿಧಿಯಿಂದ ಪ್ರಧಾನಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ದೇಶಾದ್ಯಂತ ಕೊರೋನ ಸೋಂಕು ಆತಂಕ ಮೂಡಿಸಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಮಂಡ್ಯ ಜಿಲ್ಲಾ ಸಂಸದರ ಪ್ರದೇಶಾಭಿವೃದ್ದಿ ನಿಧಿಯಿಂದ ಒಂದು ಕೋಟಿ ರೂ.ವನ್ನು ವರ್ಗಾಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
Next Story