ರೈತರ ಉತ್ಪನ್ನಗಳ ಖರೀದಿಗೆ ರಾಜ್ಯ ಸರಕಾರ ಮಧ್ಯ ಪ್ರವೇಶಿಸಬೇಕು: ಸಿದ್ದರಾಮಯ್ಯ
ಬೆಂಗಳೂರು, ಮಾ.30: ಲಾಕ್ಡೌನ್ನಿಂದಾಗಿ ತರಕಾರಿ, ಹಣ್ಣು, ಹೂ ಮಾರಾಟಕ್ಕೆ ಅವಕಾಶ ಇಲ್ಲದೆ ಇವುಗಳನ್ನು ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಈ ಉತ್ಪನ್ನಗಳ ಅಲಭ್ಯತೆಯಿಂದಾಗಿ ಬಳಕೆದಾರರು ಕಂಗಾಲಾಗಿದ್ದಾರೆ. ರಾಜ್ಯ ಸರಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ಉತ್ಪನ್ನಗಳನ್ನು ಖರೀದಿಸಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕುರಿಗಳಿಂದ ಕೊರೋನ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಜನ ಕುರಿಗಳನ್ನು ಹೊಡೆಯುವ, ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
Next Story