ಇವತ್ತಿನ ಪರಿಸ್ಥಿತಿಯ ಭೀಕರತೆಗೆ ಸಾಕ್ಷಿ: ಕುಮಾರಸ್ವಾಮಿ
ಲಾಕ್ಡೌನ್: ಕಲಬುರಗಿ ರೈತನ ಆತ್ಮಹತ್ಯೆ
ಬೆಂಗಳೂರು, ಮಾ.31: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಲಾಕ್ಡೌನ್ ಆಗಿರುವುದರಿಂದ ಕಲಬುರಗಿಯಲ್ಲಿ ಕಲ್ಲಂಗಡಿ ಬೆಳೆದ ರೈತ ಆತ್ಮಹತ್ಯೆಗೆ ಶರಣಾಗಿರುವುದು ಇವತ್ತಿನ ಪರಿಸ್ಥಿತಿ ಎಷ್ಟು ಭೀಕರವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯಾದ್ಯಂತ ಲಾಕ್ಡೌನ್ ಆಗಿರುವುದರಿಂದ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಂದು ನೆನ್ನೆಯೇ(ಸೋಮವಾರ) ಹೇಳಿದ್ದೆ. ಈಗ ಕಲ್ಲಂಗಡಿ ಬೆಳೆದ ರೈತ, ಅದನ್ನು ಮಾರಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ವಿಷಾದಿಸಿದರು.
ಕೊರೋನ ಸೋಂಕಿನ ನಡುವೆಯು ನಮ್ಮ ರೈತರನ್ನು, ಕಾರ್ಮಿಕರನ್ನು ಒಳಗೊಂಡಂತೆ ರಾಜ್ಯದ ಜನತೆಯನ್ನು ರಕ್ಷಿಸಿಕೊಳ್ಳುವುದು ನಮ್ಮ ಆದ್ಯತೆ ಆಗಬೇಕು. ಈ ನಿಟ್ಟಿನಲ್ಲಿ ಕೂಡಲೇ ರೈತರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಬೇಕು. ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
Next Story