ವಾಹನ ಚಾಲಕರಿಂದ ಲಂಚ ಪಡೆದ ಆರೋಪ: ಇಬ್ಬರು ಅಧಿಕಾರಿಗಳ ಅಮಾನತು
ಬೆಂಗಳೂರು, ಎ.3: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಏಳರಲ್ಲಿ ಬರುವ ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಗುರುವಾರ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಾಟ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಆರೋಪದಡಿ ಸಾರಿಗೆ ಇಲಾಖೆಯ ಇಬ್ಬರು ಇನ್ಸ್ಪೆಕ್ಟರ್ ಗಳನ್ನು ಅಮಾನತುಗೊಳಿಸಿ, ಒಬ್ಬ ಮಾಜಿ ಹೋಂಗಾರ್ಡ್ ನನ್ನು ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಶಿವಮೂರ್ತಿ ತಿಳಿಸಿದ್ದಾರೆ.
ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಗಳಾದ ಟಿ.ಕೆ.ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ. ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಂಗಾರ್ಡ್ ವಿವೇಕ್ ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಕರಿಯಪ್ಪರಿಂದ 1,250 ರೂ., ಜಯಣ್ಣರಿಂದ 1,100 ರೂ., ವಿವೇಕ್ ರಿಂದ 800 ರೂ. ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ 12,350 ರೂ,ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story