ದೀಪ ಹಚ್ಚುವುದರಿಂದ ಕೊರೋನ ಹೋಗುತ್ತದೆಯೇ: ಸಿದ್ದರಾಮಯ್ಯ ಪ್ರಶ್ನೆ
ಮೈಸೂರು, ಎ.3: ದೀಪ ಹಚ್ಚುವುದರಿಂದ ಕೊರೋನ ಹೋಗುತ್ತದೆಯೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಎ.5ರ ರವಿವಾರ ರಾತ್ರಿ 9 ಗಂಟೆಗೆ ದೀಪ ಹಚ್ಚಿ ಎಂಬ ಹೇಳಿಕೆ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ದೀಪ ಹಚ್ಚಿದರೆ ಕೊರೋನ ಹೋಗುತ್ತದೆಯೆ? ಹಾಗಿದ್ದರೆ ಹಚ್ಚಲಿ ಬಿಡಿ ಎಂದು ಹೇಳಿದರು.
Next Story