ತೀರ್ಥಹಳ್ಳಿ: ಮಂಗನ ಕಾಯಿಲೆಗೆ ಮತ್ತೊಂದು ಬಲಿ
12 ದಿನಗಳಲ್ಲಿ ಮೂರನೇ ಪ್ರಕರಣ
ಸಾಂದರ್ಭಿಕ ಚಿತ್ರ
ತೀರ್ಥಹಳ್ಳಿ, ಎ.6: ತಾಲೂಕಿನ ಕೋಣಂದೂರು ಸಮೀಪದ ಉಡುಕೆರೆಯ ಸುಬ್ರಮ್ಮಣ್ಯ(52) ಎಂಬವರು ಮಂಗನ ಕಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇವರಿಗೆ ಮಂಗನ ಕಾಯಿಲೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ತಾಲೂಕಿನಾದ್ಯಂತ ಮಂಗನ ಕಾಯಿಲೆಯ ಆತಂಕ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ ಹನ್ನೆರಡು ದಿನಗಳಲ್ಲಿ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.
Next Story