ನ್ಯಾಯಬೆಲೆ ಅಂಗಡಿ ಅಕ್ಕಿ ಅಕ್ರಮ ದಾಸ್ತಾನು: ಇಬ್ಬರ ಬಂಧನ
ರಾಯಚೂರು, ಎ.7: ಕೊರೋನ ವೈರಸ್ ನಿಯಂತ್ರಣಕ್ಕೆ ಲಾಕ್ಡೌನ್ ಹಿನ್ನೆಲೆಯಲ್ಲಿ ಊಟಕ್ಕಾಗಿ ಸಾವಿರಾರು ಜನರು ಪರದಾಡುವಂತಹ ಪರಿಸ್ಥಿತಿ ಉದ್ಭವವಾಗಿದೆ. ಆದರೆ, ರಾಯಚೂರು ಜಿಲ್ಲೆಯ ದೇವದುರ್ಗ ನಗರದಲ್ಲಿ ನ್ಯಾಯಬೆಲೆ ಅಂಗಡಿಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿದ್ದು, ಪೊಲೀಸರು ಆ ಮನೆಗಳ ಮೇಲೆ ದಾಳಿ ನಡೆಸಿ 1.10 ಲಕ್ಷ ರೂ.ಮೌಲ್ಯದ 99 ಅಕ್ಕಿ ಮೂಟೆಗಳನ್ನು ವಶಕ್ಕೆ ಪಡೆದು, ಶ್ರೀಕಾಂತ್ ಹಾಗೂ ಬಸವರಾಜ ಎಂಬಿಬ್ಬರನ್ನು ಬಂಧಿಸಿದ್ದಾರೆ.
ಒಂದೇ ಕುಟುಂಬದ ಮೂವರು(ತಂದೆ, ಮಕ್ಕಳು) ದೇವದುರ್ಗದ ನ್ಯಾಯಬೆಲೆ ಅಂಗಡಿಗಳ ಅಕ್ಕಿಯನ್ನು ತಮ್ಮ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿದ್ದರು.
ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿದೆ. ಇದೇ ರೀತಿಯ ಘಟನೆ ಹಲವು ಬಾರಿ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಪಾರದರ್ಶಕ ತನಿಖೆ ನಡೆಸಿ, ಪ್ರಕರಣದಲ್ಲಿ ಯಾರ ಕೈವಾಡವಿದೆ ಎಂಬುದನ್ನು ತಿಳಿಸುವಂತೆ ದೇವದುರ್ಗ ಜನತೆ ಮನವಿ ಮಾಡಿದ್ದಾರೆ.
Next Story