ಯಡಿಯೂರಪ್ಪರ ಖಡಕ್ ಎಚ್ಚರಿಕೆ ಕಾರ್ಯರೂಪಕ್ಕೆ ಬರಲಿ: ಸಿದ್ದರಾಮಯ್ಯ
ಅಲ್ಪಸಂಖ್ಯಾತರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದ ಸಿಎಂ
ಬೆಂಗಳೂರು, ಎ.7: ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸಮುದಾಯದ ವಿರುದ್ದ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದು ಕಾರ್ಯರೂಪಕ್ಕೆ ಬರಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕೊರೋನ ಹಾವಳಿಗೆ ಜಾತಿ ಧರ್ಮಗಳ ಬಣ್ಣ ಹಚ್ಚಿ ಸಮಾಜವನ್ನು ಒಡೆಯುವ ಕೆಲಸದಲ್ಲಿ ತೊಡಗುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆಂದು ಅವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೋನ ಸೋಂಕನ್ನೇ ಮುಂದಿಟ್ಟುಕೊಂಡು ಕೆಲವರು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲು ಮುಂದಾಗಿದ್ದಾರೆ, ಇಂತವರಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅವರ ಈ ಖಡಕ್ ಎಚ್ಚರಿಕೆ ಕಾರ್ಯರೂಪಕ್ಕೆ ಇಳಿಸಬೇಕೆಂದು ತಿಳಿಸಿದ್ದಾರೆ.
Next Story