ಲಾಕ್ಡೌನ್ ನಡುವೆ ಸಚಿವ ಸಿ.ಟಿ.ರವಿ ವ್ಯವಸಾಯ
ಚಿಕ್ಕಮಗಳೂರು, ಎ.7: ಕೊರೊನ ವೈರಸ್ ಹರಡುವುದನ್ನು ತಡೆಗಟ್ಟುಲು ರಾಜ್ಯಾದ್ಯಂತ ಲಾಕ್ಡೌನ್ ವಿಧಿಸಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿದ್ದು, ಮಂಗಳವಾರ ತಮ್ಮ ಫಾರ್ಮ್ಹೌಸ್ನಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ವ್ಯವಸಾಯ ಮಾಡುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.
ಮಂಗಳವಾರ ಬಿಡುವಿನ ಸಮಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಭೂಮಿ ಉಳುಮೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಸೋಮವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದರಿಂದ ಭೂಮಿ ಅಲ್ಪಸ್ವಲ್ಪ ಹದಗೊಂಡಿದೆ. ರಾಮನಹಳ್ಳಿಯಲ್ಲಿರುವ ತಮ್ಮ ಫಾರ್ಮ್ ಹೌಸ್ನಲ್ಲಿ ಸಚಿವ ಸಿ.ಟಿ.ರವಿ ಟ್ರ್ಯಾಕ್ಟರ್ ನಲ್ಲಿ ಉಳುಮೆ ಮಾಡಿದರು.
Next Story