ಕಲಬುರ್ಗಿ: ರೈತ ಆತ್ಮಹತ್ಯೆ
ಕಲಬುರ್ಗಿ, ಎ.7: ಲಾಕ್ಡೌನ್ ನಡುವೆ ಪಡೆದ ಸಾಲವನ್ನು ಮರುಪಾವತಿ ಮಾಡಲಾಗದೆ ನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಮಲ್ಲಾಬಾದ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗ್ರಾಮದ ಕಾಳಪ್ಪ ಕಂಬಾರ(62) ಆತ್ಮಹತ್ಯೆಗೈದವರು ಎಂದು ತಿಳಿದುಬಂದಿದೆ.
ಬ್ಯಾಂಕ್ ಮತ್ತು ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಘಟನೆ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story