ರೈತರಿಂದ ತರಕಾರಿ ಖರೀದಿಸಿ ಉಚಿತವಾಗಿ ಹಂಚಿದ ಸತೀಶ್ ಜಾರಕಿಹೊಳಿ
ಬೆಳಗಾವಿ, ಎ.13: ಲಾಕ್ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಒಳಗಾಗಿರುವ ರೈತರಿಂದ ತರಕಾರಿ ಖರೀದಿಸಿ ಜನರಿಗೆ ಉಚಿತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಂಚಿಕೆ ಮಾಡಿದ್ದಾರೆ.
ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹೂ ಕೋಸು, ಎಲೆಕೋಸು ಹಾಗೂ ತರಕಾರಿಗಳಿಗೆ ಸೂಕ್ತ ಬೆಲೆ ದೊರೆಯದ ಕಾರಣ ಅದನ್ನು ರಸ್ತೆಗೆ ಎಸೆದು ನಾಶ ಮಾಡುತ್ತಿದ್ದರು. ಈ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಸತೀಶ್ ಜಾರಕಿಹೊಳಿ ಅವರು, ರೈತರಿಂದ ಯೋಗ್ಯ ದರದಲ್ಲಿ ತರಕಾರಿಗಳನ್ನು ಖರೀದಿಸಿ ಕ್ಷೇತ್ರದ ಬಡ ಜನರಿಗೆ ವಿತರಣೆ ಮಾಡಿದ್ದಾರೆ.
Next Story