ಸವಣೂರು ಮಸೀದಿಯ ಆಡಳಿತ ಸಮಿತಿ ಸೂಪರ್ ಸೀಡ್: ವಕ್ಫ್ ಬೋರ್ಡ್ ಆದೇಶ
ಬೆಂಗಳೂರು, ಎ.22: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಾಗಿದ್ದು, ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿ ಎ.17ರಂದು ಜುಮ್ಮಾ ನಮಾಝ್(ಶುಕ್ರವಾರದ ವಿಶೇಷ ಪ್ರಾರ್ಥನೆ) ನೆರವೇರಿಸಲು ಅವಕಾಶ ಕಲ್ಪಿಸಿದ್ದರಿಂದ ಹಾವೇರಿ ಜಿಲ್ಲೆಯ ಸವಣೂರು ನಗರದ ಜಾಮಿಯಾ ಮಸೀದಿಯ ಆಡಳಿತ ಸಮಿತಿಯನ್ನು ಸೂಪರ್ಸೀಡ್ ಮಾಡಿ ರಾಜ್ಯ ವಕ್ಫ್ ಬೋರ್ಡ್ ಆದೇಶ ಹೊರಡಿಸಿದೆ.
ಅಲ್ಲದೆ, ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಹಮ್ಮದ್ ಲಿಯಾಖತ್ ಎಂಬವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿದೆ.
Next Story