ಅನಾರೋಗ್ಯ: ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು
ಹಾಸನ, ಮೇ.21: ಪರಿಸರ ಹೋರಾಟಗಾರ್ತಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರನ್ನು ಅನಾರೋಗ್ಯ ಹಿನ್ನೆಲೆ ಹಾಸನದ ಖಾಸಗಿ ನರ್ಸಿಂಗ್ ಹೋಂಗೆ ಗುರುವಾರ ದಾಖಲಿಸಲಾಗಿದೆ.
ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ. ಸಾಲುಮರದ ತಿಮ್ಮ ಅವರು ತಮ್ಮ ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ಬಳ್ಳೂರು ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ವಾಸವಾಗಿದ್ದಾರೆ.
ಗುರುವಾರ ಅವರಿಗೆ ತೀವ್ರ ಹೊಟ್ಟೆ ನೋವು ಹಾಗೂ ವಾಂತಿ ಆದ ಹಿನ್ನೆಲೆಯಲ್ಲಿ ಹಾಸನದ ಖಾಸಗಿ ನರ್ಸಿಂಗ್ ಹೋಂ ಮಣಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಹೊಟ್ಟೆನೋವಿನಿಂದ ಬಳಲುತ್ತಿದ್ದ ಅಜ್ಜಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಮ್ಮಕ್ಕ ಅವರ ಪುತ್ರ ಬಳ್ಳೂರು ಉಮೇಶ್ ತಿಳಸಿದ್ದಾರೆ.
Next Story