"ನಮಗೆ ಚಪ್ಪಾಳೆ ಬೇಡ, ಸೌಲಭ್ಯ ಕೊಡಿ": ಜೂ.4ರಂದು ಆರೋಗ್ಯ ಸಿಬ್ಬಂದಿ ಪ್ರತಿಭಟನೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ.2: ಕೋವಿಡ್-19 ಸಂಬಂಧ ಸೂಕ್ತ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜೂ.4ರಂದು "ನಮಗೆ ಚಪ್ಪಾಳೆ ಬೇಡ-ಸೌಲಭ್ಯ ಕೊಡಿ" ಘೋಷಣೆಯೊಂದಿಗೆ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಂಘ, ಸಂಯೋಜಿತ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್) ನೇತೃತ್ವದಲ್ಲಿ ಈ ಧರಣಿ ಹಮ್ಮಿಕೊಂಡಿದ್ದು, ಹೊರ ಗುತ್ತಿಗೆ ಪದ್ಧತಿ ಕೈಬಿಡಬೇಕೆಂದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಮಾಡದಿದ್ದರೆ, ಕೆಲಸ ಬಹಿಷ್ಕರಿಸಲಾಗುವುದೆಂದು ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
Next Story