ಚಿಕ್ಕಮಗಳೂರು: ಕಾರಿಗೆ ತಾಗಿ ಆಂಬುಲೆನ್ಸ್ ಗೆ ಢಿಕ್ಕಿಯಾದ ಆಟೋ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಚಿಕ್ಕಮಗಳೂರು, ಜೂ.6: ನಿಂತಿದ್ದ ಕಾರು ಏಕಾಏಕಿ ರಸ್ತೆಗೆ ಬಂದ ಪರಿಣಾಮ ಆಟೋ ರಿಕ್ಷಾವೊಂದು ಕಾರಿಗೆ ತಾಗಿ ಆಂಬುಲೆನ್ಸ್ ಗೆ ಢಿಕ್ಕಿಯಾಗಿದ್ದು, ರಿಕ್ಷಾ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಾಳಗಡಿ ರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ರಸ್ತೆ ಬದಿ ನಿಂತಿದ್ದ ಕಾರು ಏಕಾಏಕಿ ರಸ್ತೆಗೆ ಬಂದ ಪರಿಣಾಮ ಆಟೋ ರಿಕ್ಷಾವೊಂದು ಕಾರಿಗೆ ತಾಗಿದೆ. ಈ ಸಂದರ್ಭ ರಿಕ್ಷಾ ಚಾಲಕ ರಸ್ತೆಯಿಂದ ಕೆಳಕ್ಕೆ ಬಿದ್ದಿದ್ದಾರೆ. ಬಳಿಕ ಆಟೋ ಆಂಬುಲೆನ್ಸ್ ಗೆ ಢಿಕ್ಕಿಯಾಗಿದೆ. ಆದರೆ ರಿಕ್ಷಾ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story