ಚೀನಾ ಗಡಿ ವಿವಾದ: ಸ್ಪಷ್ಟ ಚಿತ್ರಣವನ್ನು ದೇಶದ ಮುಂದಿಡಲು ಪ್ರಧಾನಿಗೆ ದೇವೇಗೌಡ ಆಗ್ರಹ
ಬೆಂಗಳೂರು, ಜೂ.16: ಚೀನಾ ಗಡಿ ವಿವಾದದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ದೇವೇಗೌಡ ಅವರು, ಪ್ರಧಾನಿ ಮತ್ತು ರಕ್ಷಣಾ ಸಚಿವರು ಗಡಿ ವಿವಾದದ ಬಗ್ಗೆ ಸ್ಪಷ್ಟ ಚಿತ್ರಣವನ್ನು ದೇಶದ ಮುಂದಿಡಲಿ ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ದೇವೇಗೌಡ ಅವರು, ಗಾಲ್ವನ್ ಕಣಿವೆಯಿಂದ ಬರುತ್ತಿರುವ ಸುದ್ದಿಗಳು ದಿಗ್ಭ್ರಮೆ ಮೂಡಿಸುತ್ತಿವೆ. ಪರಿಸ್ಥಿತಿ ತಿಳಿಗೊಳಿಸುವ ಪ್ರಕ್ರಿಯೆಯಲ್ಲಿ ನಮ್ಮ ಸೈನಿಕರ ಜೀವ ಯಾಕೆ ಹೋಗುತ್ತಿದೆ? ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮತ್ತು ರಕ್ಷಣಾ ಸಚಿವರು ಚೀನಾದೊಂದಿಗಿನ ಗಡಿ ವಿವಾದದ ಬಗ್ಗೆ ಸ್ಪಷ್ಟ ಚಿತ್ರಣವನ್ನು ದೇಶದ ಮುಂದಿಡಲಿ ಎಂದು ಒತ್ತಾಯಿಸಿದ್ದಾರೆ.
Reports coming from #GalwanValley are disturbing. Why did our soldiers lose their lives during a de-escalation process? In national interest, the PM and RM should offer a clearer picture to the nation on the border issue with the Chinese. #LADAKHSTANDOFF
— H D Devegowda (@H_D_Devegowda) June 16, 2020
Next Story