ವ್ಯಸನ ಮುಕ್ತ ಸ್ವಸ್ಥ ಸಮಾಜ ನಿರ್ಮಿಸೋಣ: ಸಿಎಂ ಯಡಿಯೂರಪ್ಪ
ಬೆಂಗಳೂರು, ಜೂ. 26: ಮಾದಕ ವಸ್ತುಗಳ ವ್ಯಸನ ಕೇವಲ ವ್ಯಕ್ತಿತ್ವಕ್ಕಷ್ಟೇ ಅಲ್ಲದೆ, ಇಡೀ ಸಮಾಜದ ಸ್ವಾಸ್ಥ್ಯಕ್ಕೆ ದೊಡ್ಡ ಬೆದರಿಕೆ. ಕೌಟುಂಬಿಕ ಬದುಕನ್ನೇ ನಾಶ ಮಾಡುವ ಮಾದಕ ವಸ್ತುಗಳ ವ್ಯಸನ ಮತ್ತು ಸಾಗಾಣೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸೋಣ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಶುಕ್ರವಾರ ಟ್ವೀಟ್ ಮಾಡಿರುವ ಅವರು, ಅಂತರ್ ರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಹಿನ್ನೆಲೆಯಲ್ಲಿ ವ್ಯಸನ ಮುಕ್ತ ಸಮಾಜ ಮತ್ತು ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡೋಣ. ಮಾದಕ ವಸ್ತುಗಳ ವ್ಯಸನದ ಪಿಡುಗು ಮತ್ತು ಸಾಗಾಟದಂತಹ ಅಕ್ರಮಗಳಿಂದ ಸಮಾಜವನ್ನು ಮುಕ್ತಗೊಳಿಸಲು ಶ್ರಮಿಸೋಣ' ಎಂದು ಕರೆ ನೀಡಿದ್ದಾರೆ.
Next Story