ಅತಿಥಿ ಉಪನ್ಯಾಸಕರಿಗೆ ಸರಕಾರ ತಕ್ಷಣವೇ ಸ್ಪಂದಿಸಬೇಕು: ಕುಮಾರಸ್ವಾಮಿ
ಬೆಂಗಳೂರು, ಜೂ. 30: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ದುರಾದೃಷ್ಟಕರ. ಸರಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ಕೊರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
Next Story