ರಾಜ್ಯದಲ್ಲಿಂದು 947 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿಗೆ 20 ಮಂದಿ ಬಲಿ
15,000 ದಾಟಿದ ಸೋಂಕಿತರ ಸಂಖ್ಯೆ
ಬೆಂಗಳೂರು, ಜೂ.29: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ 947 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ15,242ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 20 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿಯಲ್ಲಿ 6, ಬೆಂಗಳೂರು ನಗರ ಜಿಲ್ಲೆಯಲ್ಲಿ 4, ಹಾವೇರಿ, ವಿಜಯಪುರ, ಧಾರವಾಡದಲ್ಲಿ ತಲಾ 2, ಕೋಲಾರ, ದಾವಣಗೆರೆ, ಬೆಳಗಾವಿ, ಮೈಸೂರಿನಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 246ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 503, ಬಳ್ಳಾರಿ 61, ಹಾವೇರಿ 49, ದಕ್ಷಿಣ ಕನ್ನಡ 44, ಉತ್ತರ ಕನ್ನಡ 40, ವಿಜಯಪುರ 39, ಶಿವಮೊಗ್ಗ 22, ಬೆಂಗಳೂರು ಗ್ರಾಮಾಂತರ 21, ಬೀದರ್ 17, ಧಾರವಾಡ 17, ಹಾಸನ 16, ರಾಯಚೂರು, ಕಲಬುರಗಿಯಲ್ಲಿ ತಲಾ 15, ಚಿಕ್ಕಬಳ್ಳಾಪುರ 13, ದಾವಣಗೆರೆ 12, ರಾಮನಗರ 12, ಚಿಕ್ಕಮಗಳೂರು 10, ಉಡುಪಿ, ಮೈಸೂರಿನಲ್ಲಿ ತಲಾ 9, ಬಾಗಲಕೋಟೆ, ಕೊಡಗು ಜಿಲ್ಲೆಯಲ್ಲಿ ತಲಾ 4, ಕೋಲಾರ, ಚಿತ್ರದುರ್ಗದಲ್ಲಿ ತಲಾ 3, ಯಾದಗಿರಿ, ಮಂಡ್ಯ, ಗದಗ, ಬೆಳಗಾವಿಯಲ್ಲಿ ತಲಾ 2, ತುಮಕೂರಿನಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 15,242 ಕೊರೋನ ಸೋಂಕಿತರ ಪೈಕಿ 7,918 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 235 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 246 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 7,074 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಮಂಗಳವಾರ ಒಟ್ಟು 436225 ಜನರ ಮೇಲೆ ನಿಗಾ ವಹಿಸಲಾಗಿದ್ದು, ಅದರಲ್ಲಿ 23871 ಪ್ರಥಮ ಸಂಪರ್ಕಿತರು ಹಾಗೂ 19754 ದ್ವಿತೀಯ ಸಂಪರ್ಕಿತರಾಗಿದ್ದಾರೆ. ಅಲ್ಲದೆ, ಇಂದು ಒಟ್ಟು 15588 ಮಾದರಿಗಳನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 14300 ಮಾದರಿಗಳು ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.