ಮೈಸೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿಗೆ ತೆರಳಿ ಸೋಮವಾರ ನಿಧನರಾದ ಹಿರಿಯ ಸಾಹಿತಿ, ಕರ್ನಾಟಕ ರತ್ನ, ನಾಡೋಜ ಡಾ.ದೇವೇಗೌಡ ಜವರೇಗೌಡ(ದೇಜಗೌ) ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ದೇಜಗೌ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.