ಸರಕಾರಿ ನೌಕರರಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸುತ್ತೋಲೆ ಹೊರಡಿಸಿದ ಸರಕಾರ
ಬೆಂಗಳೂರು, ಜು.4: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ದೊಡ್ಡಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ತನ್ನ ಸರಕಾರಿ ನೌಕರರಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಹೇಳಿದೆ.
ಇನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿರುವ ಪ್ರದೇಶಗಳಲ್ಲಿ ವಾಸವಾಗಿರುವ ಸಚಿವಾಲಯದ ಅಧಿಕಾರಿಗಳು/ಸಿಬ್ಬಂದಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.
ಹೀಗೆ ವಿನಾಯಿತಿ ಪಡೆದವರು ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸವನ್ನು ನಿರ್ವಹಿಸುವಂತೆ ರಾಜ್ಯ ಸರಕಾರ ಸೂಚಿಸಿದೆ. ಈ ಕುರಿತು ಸರಕಾರದ ಉಪ ಕಾರ್ಯದರ್ಶಿ ಎಚ್.ಎಸ್. ಚನ್ನಬಸಪ್ಪ ಪ್ರಕಟಣೆ ಹೊರಡಿಸಿದ್ದಾರೆ.
Next Story