ಕೊರೋನ ಸೋಂಕಿತನ ಅಂತ್ಯಕ್ರಿಯೆ: ಚಿತಾಗಾರದ ಬಳಿ ಇರುವ ಸ್ಲಂ ಸಂಪೂರ್ಣ ಸ್ಯಾನಿಟೈಸ್ ಮಾಡಲು ಒತ್ತಾಯ
ಶಿವಮೊಗ್ಗ, ಜಯ.9: ಕೊರೋನ ಸೋಂಕಿಗೆ ತುತ್ತಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರವನ್ನು ರೋಟರಿ ಚಿತಾಗಾರದಲ್ಲಿ ನಡೆಸಲಾಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಚಿತಾಗಾರದ ಬಳಿ ಇರುವ ಸ್ಲಂಗೆ ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು ಎಂದು ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಕಾರ್ಪೊರೇಟರ್ ಗಳು, ಚಿತಾಗಾರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರೊಬ್ಬರ ಅಂತಿಮ ಸಂಸ್ಕಾರ ನಡೆಸಲಾಗಿದೆ. ಈ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಚಿತಾಗಾರಕ್ಕೆ ಹೋಗುವ ದಾರಿಯಲ್ಲಿ ಬೇಲಿ ಹಾಕಿದ್ದಾರೆ. ಹಾಗಾಗಿ ಕೂಡಲೆ ಚಿತಾಗಾರದ ಬಳಿ ಇರುವ ಸ್ಲಂ ನಲ್ಲಿ ಸ್ಯಾನಿಟೈಸ್ ಮಾಡಬೇಕು, ಅಲ್ಲಿನ ನಿವಾಸಿಗಳಲ್ಲಿ ಜಿಲ್ಲಾಡಳಿತ ಭರವಸೆ ಮೂಡಿಸಬೇಕು ಎಂದು ಕಾರ್ಪೊರೇಟರ್ ಗಳು ಒತ್ತಾಯಿಸಿದರು.
ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೇಶ್, ಕಾರ್ಪೊರೇಟರ್ ಗಳಾದ ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ ಸೇರಿದಂತೆ ಹಲವರು ಇದ್ದರು.
Next Story