ಹಾಲಿನ ಪ್ರೋತ್ಸಾಹ ಧನ ನೀಡದೆ ರಾಜ್ಯ ಸರಕಾರದಿಂದ ರೈತರಿಗೆ ಅನ್ಯಾಯ: ದಿನೇಶ್ ಗುಂಡೂರಾವ್
ಬೆಂಗಳೂರು, ಜು.9: ರಾಜ್ಯ ಸರಕಾರ ರೈತರಿಗೆ ಕಾನೂನುಬದ್ಧವಾಗಿ ಕೊಡಬೇಕಾದ ಹಾಲಿನ ಪ್ರೋತ್ಸಾಹ ಧನವನ್ನು ಮೂರು ತಿಂಗಳಿನಿಂದ ನೀಡದೆ ಘೋರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಪರಿಹಾರ ಹಣ 1,610 ಕೋಟಿ ರೂ.ಇನ್ನು ಸರಿಯಾಗಿ ವಿತರಣೆಯಾಗಿಲ್ಲ. ಆದರೆ, ರೈತರಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಹಣಕ್ಕೆ ಮಾತ್ರ ರಾಜ್ಯ ಸರಕಾರ ಕತ್ತರಿ ಹಾಕುತ್ತಿರುವುದು ಸರಿಯಲ್ಲ. ಕೂಡಲೇ ರೈತರ ಪಾಲಿನ 345 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
Next Story