ಲಾಕ್ಡೌನ್ ನಿಂದ ರದ್ದಾದ ಜೆಡಿಎಸ್ ಸಭೆಗಳು
ಬೆಂಗಳೂರು, ಜು.14: ಲಾಕ್ಡೌನ್ ಕಾರಣದಿಂದಾಗಿ ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ, ಮುಂದಿನ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲು ಆಹ್ವಾನಿಸಿದ್ದ ಸಭೆಗಳನ್ನು ಜೆಡಿಎಸ್ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನೆಲೆ ಈ ವಾರ ನಡೆಸಬೇಕಿದ್ದ ಜಿಲ್ಲಾವಾರು ಸಭೆಗಳನ್ನು ಮುಂದೂಡಲಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ಕಳೆದ ವಾರ ಪಕ್ಷದ ಮುಖಂಡರ ಸಭೆಗಳನ್ನು ಆರಂಭಿಸಲಾಗಿತ್ತು. ಈಗಾಗಲೇ ಬೆಂಗಳೂರು ನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಮುಖಂಡರ ಸಭೆ ನಡೆಸಲಾಗಿತ್ತು. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋೀಂಕಿನ ಹಿನ್ನೆಲೆ ಆಯಾ ಜಿಲ್ಲೆಯ ಮುಖಂಡರ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
Next Story