ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ವಿಜಯಪುರ, ಜು.15: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ಖುಶಾಲ್ ಹುಲಕಂಟೆಪ್ಪ ಕಲ್ಲೂರ (17) ಆತ್ಮಹತ್ಯೆ ಮಾಡಿಕೊಂಡಿ ವಿದ್ಯಾರ್ಥಿ. ಸಿಂದಗಿ ಪಟ್ಟಣದ ಎಚ್.ಜಿ. ಪ.ಪೂ ಕಾಲೇಜಿನಲ್ಲಿ ಓದುತ್ತಿದ್ದ ಈತ ನಿನ್ನೆ ಪ್ರಕಟಗೊಂಡ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡಿದ್ದಾನೆ. ಇದರಿಂದ ಬೇಸತ್ತ ಖುಶಾಲ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story