ರಾಜ್ಯ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆಯ ಸೇವೆ ಅಭಿನಂದನಾರ್ಹ: ದೇವೇಗೌಡ
ಬೆಂಗಳೂರು, ಜು.21: ನಮ್ಮ ರಾಜ್ಯಕ್ಕೆ ಹಾಗೂ ದೇಶಕ್ಕೆ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲ್ಲಿಸಿರುವ ಸೇವೆಗೆ ನನ್ನ ಹೃತ್ಪೂರ್ವಕವಾದ ಅಭಿನಂದನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶುಭ ಕೋರಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಜನ್ಮ ದಿನಕ್ಕೆ ಶುಭಾಶಯ ಕೋರಿರುವ ಅವರು, ಅವರ ತಾಳ್ಮೆ, ಬುದ್ಧಿವಂತಿಕೆ, ಗಮನಾರ್ಹ ದೃಷ್ಟಿ ಮತ್ತು ಅನುಕರಣೀಯ ನಾಯಕತ್ವ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. ಅವರು ನಮ್ಮ ರಾಜ್ಯಕ್ಕೆ ಹಾಗೂ ದೇಶಕ್ಕೆ ಸಲ್ಲಿಸಿರುವ ಸೇವೆಗೆ ನನ್ನ ಅಭಿನಂದನೆಗಳೆಂದು ಶುಭಾಶಯ ಕೋರಿದ್ದಾರೆ.
Next Story