ರಸ್ತೆ ಬದಿ ಮಲಗಿದ್ದ ಭಿಕ್ಷುಕಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ
ಮಂಡ್ಯ, ಜು.24: ರಸ್ತೆ ಬದಿ ನಿದ್ರಿಸುತ್ತಿದ್ದ ಸುಮಾರು 45 ವರ್ಷದ ಭಿಕ್ಷುಕಿಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಗುರುವಾರ ತಡರಾತ್ರಿ ನಗರದಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದ ಬಾಟಾ ಶೋರೂಂ ಸಮೀಪ ಈ ಕೃತ್ಯವೆಸಗಲಾಗಿದ್ದು, ಕೊಲೆಗೆ ಮುನ್ನ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭಿಕ್ಷುಕಿ ಅಪರಿಚಿತಳಾಗಿದ್ದು, ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story