ವ್ಯಕ್ತಿಯೊಬ್ಬರಿಗೆ ಥಳಿಸಿದ ಆರೋಪ: ಮಹಿಳೆ ಸೇರಿ ಮೂವರ ಬಂಧನ
ವಿಜಯಪುರ, ಜು.27: ವ್ಯಕ್ತಿಯೊಬ್ಬರಿಗೆ ಥಳಿಸಿದ ಆರೋಪದ ಮೇಲೆ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಸವನಬಾಗೇವಾಡಿ ತಾಲೂಕಿನ ಮುಳವಾಡ ತಾಂಡಾ ನಿವಾಸಿ ಹುನ್ನು ರಾಠೋಡ್ ಹಲ್ಲೆಗೊಳಗಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಹುನ್ನು ರಾಠೋ ಸಾಲದ ರೂಪದಲ್ಲಿ ಕೊಟ್ಟ ಹಣವನ್ನು ಹಿಂದುರುಗಿಸಲು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ಇದರಿಂದ ಬೇಸತ್ತ ಯುವತಿಯು ಕಾಶೀನಾಥ್ ಹಾಗೂ ಸಮೀರ್ ಶೇಖ್ ಎಂಬುವರ ಜತೆ ಸೇರಿ ಹಲ್ಲೆ ಮಾಡಿದ್ದಾಳೆ ಎನ್ನಲಾಗಿದೆ.
ಕಳೆದ ಎರಡು ತಿಂಗಳು ಹಿಂದೆ ನಡೆದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹುನ್ನು ರಾಠೋಡ್ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಮೂವರ ವಿರುದ್ಧ ಅಪಹರಣ ಹಾಗೂ ಹಲ್ಲೆಯ ಕುರಿತು ದೂರು ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಲಕ್ಷ್ಮಿಬಾಯಿ, ಕಾಶಿನಾಥ ಹಾಗೂ ಸಮೀರ್ ಎಂಬವರನ್ನು ಬಂಧಿಸಿದ್ದಾರೆ.
Next Story