ಯುಪಿಎಸ್ಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಗೆ ನಾಲ್ಕು ರ್ಯಾಂಕ್: ರಮೇಶ್ ಜಾರಕಿಹೊಳಿ
ಬೆಂಗಳೂರು, ಆ.4: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ನಡೆಸಿದ 2019ನೆ ಸಾಲಿನ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ 4 ಜನ ರ್ಯಾಂಕ್ ಗಳಿಸಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಅಥಣಿ ತಾಲೂಕಿನ ಜಗದೀಶ್ ಅಡಳ್ಳಿ 440ನೇ ರ್ಯಾಂಕ್, ಹುಕ್ಕೇರಿ ತಾಲೂಕಿನ ಯರನಾಳದ ಪ್ರಫುಲ್ ದೇಸಾಯಿ 532ನೇ ರ್ಯಾಂಕ್, ರಾಯಬಾಗ ತಾಲೂಕಿನ ಗಜಾನನ ಬಾಲೆ 663ನೇ ರ್ಯಾಂಕ್ ಮತ್ತು ಚಿಕ್ಕೋಡಿಯ ಪ್ರಿಯಾಂಕಾ ಕಾಂಬ್ಳೆ 670ನೇ ರ್ಯಾಂಕ್ ಪಡೆದಿರುವುದಕ್ಕೆ ರಮೇಶ್ ಜಾರಕಿಹೊಳಿ ಅಭಿನಂದಿಸಿದ್ದಾರೆ.
ಈ ನಾಲ್ಕು ಜನರು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಬೆಳಗಾವಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇಂದಿನ ಯುವ ಪೀಳಿಗೆಗೆ ಇವರು ಆದರ್ಶಪ್ರಾಯರಾಗಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story