ಬೆಂಗಳೂರಿನಲ್ಲಿ ಘರ್ಷಣೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ದೇವೇಗೌಡ ಆಗ್ರಹ
ಬೆಂಗಳೂರು, ಆ.12: ಬೆಂಗಳೂರಿನಲ್ಲಿ ನಡೆದ ಘರ್ಷಣೆಗೆ ಕಾರಣರಾದ ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ, ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು,ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Next Story