ರಾಜ್ಯದಲ್ಲಿ ಮತ್ತೆ 6,706 ಮಂದಿಗೆ ಕೋವಿಡ್ ದೃಢ: 2 ಲಕ್ಷ ದಾಟಿದ ಸೋಂಕಿತರ ಸಂಖ್ಯೆ
ಇದುವರೆಗೆ 1.21 ಲಕ್ಷ ಮಂದಿ ಗುಣಮುಖ, 3,613 ಮಂದಿ ಸಾವು
ಬೆಂಗಳೂರು, ಆ.13: ರಾಜ್ಯದಲ್ಲಿ ಮಹಾಮಾರಿ ಕೊರೋನ ಸೋಂಕು ಆತಂಕಕಾರಿ ಸ್ಥಿತಿಯಲ್ಲಿ ಏರುತ್ತಿದೆ. ದೈನಂದಿನ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.
ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಮತ್ತೆ 6706 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2,03,200 ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 103 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 3613ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 22 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು 12, ಕಲಬುರಗಿ 9, ಬಳ್ಳಾರಿ 9, ಬೆಳಗಾವಿ 6, ಧಾರವಾಡ 6, ದಕ್ಷಿಣ ಕನ್ನಡ 6, ಕೊಪ್ಪಳ 5, ದಾವಣಗೆರೆ, ರಾಯಚೂರು, ತುಮಕೂರು, ಹಾವೇರಿಯಲ್ಲಿ ತಲಾ 3, ಮಂಡ್ಯ, ಹಾಸನ, ವಿಜಯಪುರ, ಚಿಕ್ಕಮಗಳೂರು, ಉತ್ತರ ಕನ್ನಡ, ರಾಮನಗರದಲ್ಲಿ ತಲಾ 2, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಾಗಲಕೋಟೆ, ಉಡುಪಿ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1893, ಮೈಸೂರು 522, ಬಳ್ಳಾರಿ 445, ದಾವಣಗೆರೆ 328, ಬೆಳಗಾವಿ 288, ಕಲಬುರಗಿ 285, ಧಾರವಾಡ 257, ದಕ್ಷಿಣ ಕನ್ನಡ 246, ರಾಯಚೂರು 181, ಕೊಪ್ಪಳ 148, ಬಾಗಲಕೋಟೆ 143, ಬೀದರ್ 143, ಮಂಡ್ಯ 130, ಹಾಸನ 129, ವಿಜಯಪುರ 121, ಚಿಕ್ಕಮಗಳೂರು 111, ಶಿವಮೊಗ್ಗ 105, ಗದಗ 98, ಹಾವೇರಿ 96, ತುಮಕೂರು 85, ಯಾದಗಿರಿ 83, ಕೋಲಾರ 77, ಬೆಂಗಳೂರು ಗ್ರಾಮಾಂತರ 70, ಚಿತ್ರದುರ್ಗ 67, ಉತ್ತರ ಕನ್ನಡ 64, ಚಾಮರಾಜನಗರ 56, ಕೊಡಗು 55, ರಾಮನಗರ 53, ಚಿಕ್ಕಬಳ್ಳಾಪುರದಲ್ಲಿ 25 ಪ್ರಕರಣಗಳು ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 2,03,200 ಕೊರೋನ ಸೋಂಕಿತರ ಪೈಕಿ 1,21,242 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 8609 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 3613 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 78337 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.