ವಕ್ಫ್ ಬೋರ್ಡ್ ಸಿಇಓ ಇಸ್ಲಾಹುದ್ದೀನ್ ಗದ್ಯಾಲ್ ವರ್ಗಾವಣೆ
ಬೆಂಗಳೂರು, ಆ.14: ರಾಜ್ಯ ಸರಕಾರವು ವಕ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಇಸ್ಲಾಹುದ್ದೀನ್ ಗದ್ಯಾಲ್ರನ್ನು ಶುಕ್ರವಾರ ವರ್ಗಾವಣೆ ಮಾಡಿದೆ.
ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯ ಉಪ ಕಾರ್ಯದರ್ಶಿ ಮುಹಮ್ಮದ್ ಯೂಸುಫ್ ವೈ.ಎಂ. ಅವರನ್ನು ರಾಜ್ಯ ವಕ್ಫ್ ಬೋರ್ಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಕೋಲಾರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಮಾಜುದ್ದೀನ್ ಖಾನ್ರನ್ನು ರಾಜ್ಯ ವಕ್ಫ್ ಬೋರ್ಡ್ನ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
Next Story