ಆಸ್ಪತ್ರೆಗಳಿಗೆ ಅಲೆದರೂ ಸಿಗದ ಚಿಕಿತ್ಸೆ: ಯುವಕ ಸಾವು
ಮೈಸೂರು,ಆ.16: ಆಸ್ಪತ್ರೆಗಳಿಗೆ ಅಲೆದರೂ ಚಿಕಿತ್ಸೆಗೆ ದಾಖಲಿಸಿಕೊಳ್ಳದ ಕಾರಣ ಯುವಕನೊಬ್ಬ ಸಾವಿಗೀಡಾದ್ದಾನೆ ಎನ್ನಲಾದ ಘಟನೆ ನಗರದಲ್ಲಿ ನಡೆದಿದೆ.
ಮಂಡ್ಯದ ಶರತ್ (21) ಮೃತಪಟ್ಟ ಯುವಕ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲು ಶನಿವಾರ ರಾತ್ರಿ ಪೋಷಕರು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗಳಿಗೆ ಅಲೆದಿದ್ದಾರೆ. ಕೊರೋನ ಹಿನ್ನೆಲೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ದಾಖಲಿಸಿಕೊಂಡಿಲ್ಲ. ಕೊನೆಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸಮಯಕ್ಕೆ ಸರಿಯಾಗಿ ಚಿಕಿತ್ಸೆಗೆ ದಾಖಲಿಸಿಕೊಳ್ಳದ ಕಾರಣ ಅವರು ಮೃತಪಟ್ಟ ಎಂದು ಪೋಷಕರು ನೋವು ತೋಡಿಕೊಂಡಿದ್ದಾರೆ.
Next Story