ಕುಣಿಗಲ್ ಶಾಸಕ ರಂಗನಾಥ್ ರಿಂದ ಪ್ಲಾಸ್ಮಾ ದಾನ
ಬೆಂಗಳೂರು, ಆ. 19: ಕಳೆದ ತಿಂಗಳು ಕೊರೋನ ಸೋಂಕಿಗೆ ಒಳಗಾಗಿ ಬಳಿಕ ಸಂಪೂರ್ಣ ಗುಣಮುಖರಾಗಿರುವ ಕುಣಿಗಲ್ ಶಾಸಕ ಡಾ. ರಂಗನಾಥ್ ಹಾಗೂ ಅವರ ಸಹೋದರ ಡಾ.ರಾಮಚಂದ್ರ ಪ್ರಭು ಇದೀಗ ಪ್ಲಾಸ್ಮಾವನ್ನು ಕೊರೋನ ರೋಗಿಗಳಿಗೆ ದಾನ ಮಾಡಿದ್ದಾರೆ.
ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕರು ಬುಧವಾರ ಪ್ಲಾಸ್ಮಾ ದಾನ ಮಾಡಿದ್ದಾರೆ.
Next Story