ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆ.26: ರಾಜ್ಯ ಸರಕಾರವು ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲೆಯ ಪೊಲೀಸ್ ತರಬೇತಿ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯಾಡ ಮಾರ್ಟಿನ್ ಮರ್ಬನಿಯಾಂಗ್, ಬೆಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕುಲ್ದೀಪ್ ಕುಮಾರ್ ಆರ್.ಜೈನ್, ಬಳ್ಳಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೈದುಲ್ ಅದ್ವತ್, ಬೆಂಗಳೂರಿನ ಅಪರಾಧ ವಿಭಾಗದ ಎಐಜಿಪಿಯಾಗಿ ಸೀಮಾ ಅನಿಲ್ ಲಾಟ್ಕರ್, ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಕೆ.ಬಾಬಾ ಹಾಗೂ ಕೆಎಸ್ಪಿಎಸ್ ಅಧಿಕಾರಿ ರವಿಕುಮಾರ್ ಅವರನ್ನು ಬೆಂಗಳೂರಿನ ಡಿಸಿಪಿ(ಅಪರಾಧ-1)ಯಾಗಿ ವರ್ಗಾವಣೆ ಮಾಡಲಾಗಿದೆ.
Next Story