ಕಲಬುರಗಿ: ರಸ್ತೆ ಅಪಘಾತ; ಇಬ್ಬರು ಯುವಕರ ಮೃತ್ಯು
ಕಲಬುರಗಿ: ತಾಲೂಕಿನ ಮಾಲಗತ್ತಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೋಟಾರ್ ಬೈಕ್ ಹಾಗೂ ಡಿಸೇಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ವಾಡಿ ಪಟ್ಟಣದ ರಮೇಶ ಮರಿಯಪ್ಪ(35) ಮತ್ತು ಗಜೇಂದ್ರ ದೇವೆಂದ್ರಪ್ಪ(32) ಮೃತಪಟ್ಟವರು. ರಮೇಶ ಮತ್ತು ಗಜೇಂದ್ರ ಇಬ್ಬರು ಬೈಕ್ ಮೂಲಕ ವಾಡಿಯಿಂದ ಕಲಬುರಗಿಗೆ ಹೋಗುವ ಸಂದರ್ಭದಲ್ಲಿ ಮಾಲಗತ್ತಿ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಎದುರಿನಿಂದ ಬಂದ ಡಿಸೇಲ್ ಟ್ಯಾಂಕರ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಮೇಶ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡಿದ್ದ ಗಜೇಂದ್ರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.
ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸೇಲ್ ಟ್ಯಾಂಕರ್ ಚಾಲಕ ತಲೆಮರೆಸಿಕೊಂಡಿದ್ದಾನೆ.
Next Story