ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ: ರಾಜ್ಯ ಬಿಜೆಪಿ
ಬೆಂಗಳೂರು, ಸೆ. 17: ನಾಲ್ಕು ತಿಂಗಳ ಹಿಂದೆಯಷ್ಟೇ ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡಿದ್ದ ಅಶೋಕ್ ಗಸ್ತಿ(55) ಅವರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಬಗ್ಗೆ ರಾಜ್ಯ ಬಿಜೆಪಿಯು ಸ್ಪಷ್ಟನೆ ನೀಡಿದ್ದು, ''ಅಶೋಕ್ ಗಸ್ತಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ'' ಎಂದು ತಿಳಿಸಿದೆ.
ಕಳೆದ ಕೆಲ ದಿನಗಳಿಂದ ಕೊರೋನ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆಂದು ಸುದ್ದಿ ಹಬ್ಬಿತ್ತು. ಈ ಬಗ್ಗೆ ಇದೀಗ ರಾಜ್ಯ ಬಿಜೆಪಿಯು ಸ್ಪಷ್ಟನೆ ನೀಡಿ, ''ರಾಜ್ಯಸಭಾ ಸದಸ್ಯರಾದ ಶ್ರೀ ಅಶೋಕ್ ಗಸ್ತಿ ಅವರ ಆರೋಗ್ಯ ಕುರಿತು ಕೆಲವು ವರದಿಗಳು ಪ್ರಸಾರವಾಗುತ್ತಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದ್ದು, ಅವರು ಮರುಜನ್ಮ ಪಡೆದು ಆರೋಗ್ಯವಂತರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ'' ಎಂದು ಮನವಿ ಮಾಡಿದೆ.
ರಾಜ್ಯ ಸಭಾ ಸದಸ್ಯರಾದ ಶ್ರೀ ಅಶೋಕ್ ಗಸ್ತಿ ಅವರ ಆರೋಗ್ಯ ಕುರಿತು ಕೆಲವು ವರದಿಗಳು ಪ್ರಸಾರವಾಗುತ್ತಿದೆ.
— BJP Karnataka (@BJP4Karnataka) September 17, 2020
ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದ್ದು, ಅವರು ಮರುಜನ್ಮ ಪಡೆದು ಆರೋಗ್ಯವಂತರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ. pic.twitter.com/mFpYVJOQEy