ಸಚಿವ ಸ್ಥಾನ ನೀಡದಕ್ಕೆ ಶಾಸಕ ಕೃಷ್ಣಪ್ಪ ಬೆಂಬಲಿಗರಿಂದ ರಸ್ತೆ ತಡೆ
ಬೆಂಗಳೂರು , ಜೂ.19: ವಿಜಯ ನಗರ ಶಾಸಕ ಎಂ.ಕೃಷ್ಣಪ್ಪಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ವಿಜಯ ನಗರದ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ರಸ್ತೆಗಳಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಿದರು. ಇದರಿಂದಾಗಿ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದೆ.
ಮೆಟ್ರೋ ರೈಲು ನಿಲ್ದಾಣಕ್ಕೆ ನುಗ್ಗಿದ ಕಾರ್ಯಕರ್ತರು ರೈಲನ್ನು ಎಂಟು ನಿಮಿಷಗಳ ತಡೆದು ಪ್ರತಿಭಟನೆ ನಡೆಸಿದರು.
Next Story