ನವಲಗುಂದದಲ್ಲಿ ದಾಂದಲೆ ಪ್ರಕರಣ; ರೈತರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಧಾರವಾಡ, ಆ.11: ನವಲಗುಂದದಲ್ಲಿ ಇತ್ತೀಚೆಗೆ ನಡೆದ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ರೈತರ ಜಾಮೀನು ಅರ್ಜಿಯ ವಿಚಾರಣೆ ಗುರುವಾರ ಧಾರವಾಡದ ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ತೀರ್ಪು ಶುಕ್ರವಾರ ಪ್ರಕಟಗೊಳ್ಳುವ ನಿರೀಕ್ಷೆ ಇದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಯವು ಎರಡೂ ಕಡೆಯ ವಾದ, ಪ್ರತಿವಾದ ಆಲಿಸಿದ ನ್ಯಾಯಾಲವು ತೀರ್ಪನ್ನು ಕಾಯ್ದಿರಿಸಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಪ್ರಕಟಗೊಳ್ಳಲಿದೆ.
ಬಂಧಿತ ರೈತರ ಪರ ಧಾರವಾಡದ ವಕೀಲರ ಸಂಘ ಜಾಮೀನು ಅರ್ಜಿ ಸಲ್ಲಿಸಿದೆ.
ಒಟ್ಟು 25 ಪ್ರಕರಣಗಳಲ್ಲಿ 187ಮಂದಿಯನ್ನು ಬಂಧಿಸಲಾಗಿತ್ತು.
Next Story