ಲೋಕಾಯುಕ್ತರ ಆಯ್ಕೆಗೆ ಜ.4ರಂದು ಸಭೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜ.1: ನೂತನ ಲೋಕಾಯುಕ್ತರ ನೇಮಕ ಸಂಬಂಧ ಜ.4ರಂದು ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳು, ಸ್ಪೀಕರ್, ಸಭಾಪತಿ, ಉಭಯ ಸದನಗಳ ವಿಪಕ್ಷ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ಶುಭಾಶಯ ಕೋರಿದರು. ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ, ನೂತನ ಲೋಕಾಯುಕ್ತ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಆಯ್ಕೆಗೊಂಡ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗುವುದು. ಅವರು ಸಮ್ಮತಿಸಿದ ಬಳಿಕ ನೂತನ ಲೋಕಾಯುಕ್ತರ ನೇಮಕಕ್ಕೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು. ನೂತನ ವರ್ಷದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಶುಭಾ ಕೋರಿದ್ದೇನೆ ಎಂದು ತಿಳಿಸಿದರು.
Next Story