‘ತಮಿಳುನಾಡಿಗೆ ನೀರು ಬಿಡಲು ಪ್ರಯತ್ನಿಸಬೇಕು’
ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸಲಹೆ
ಹೊಸದಿಲ್ಲಿ, ಸೆ.2: ಕರ್ನಾಟಕ ಸರಕಾರ ತಮಿಳುನಾಡಿಗೆ ಕೆಆರ್ಎಸ್ ನೀರನ್ನು ಬಿಡಲು ಪ್ರಯತ್ನಿಸಬೇಕು. ಬದುಕಿ, ಬದುಕಲು ಬಿಡಿ ಎಂಬ ತತ್ವವನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಕೋರ್ಟ್ನ ದ್ವಿಸದಸ್ಯ ನ್ಯಾಯಪೀಠ ಸಲಹೆ ನೀಡಿದೆ.
ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾ. ದೀಪಕ್ ಮಿಶ್ರಾ ಹಾಗೂ ಜಸ್ಟಿಸ್ ಉದಯ್ ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ವಿಸ್ತ್ರತ ವಾದವನ್ನು ಆಲಿಸಲಿದೆ.
ಜೂನ್, ಜುಲೈ ಹಾಗೂ ಆಗಸ್ಟ್ನಲ್ಲಿ ತಮಿಳುನಾಡಿನಲ್ಲಿ ನೀರಿನ ಕೊರತೆ ಉಂಟಾಗಿದೆ ಎಂದಿರುವ ನ್ಯಾಯಾಲಯ ಎಷ್ಟು ಪ್ರಮಾಣದ ನೀರು ಬಿಡಬೇಕೆಂಬ ಬಗ್ಗೆ ಆದೇಶಿಸಿಲ್ಲ.
Next Story