ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಶ್ರೀನಿವಾಸ ಪ್ರಸಾದ್ ನಿರ್ಧಾರ
ಮೈಸೂರು, ಅ.12: ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ ವಿ.ಶ್ರೀನಿವಾಸ ಪ್ರಸಾದ್ ಶೀಘ್ರವೇ ಶಾಸಕತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
‘‘ಅ.17ಕ್ಕೆ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಯಾವ ಪಕ್ಷ ಸೇರಬೇಕೆಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳೆರಡೂ ಬಲಿಷ್ಠವಾಗಿವೆ’’ ಎಂದು ಪ್ರಸಾದ್ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಸಿದ್ಧರಾಮಯ್ಯ ಸರಕಾರದ ಸಂಪುಟ ವಿಸ್ತರಣೆಯ ವೇಳೆ ಕಂದಾಯ ಖಾತೆಯನ್ನು ಕಸಿದುಕೊಂಡಿದ್ದನ್ನ್ನು ಪ್ರತಿಭಟಿಸಿ ಪಕ್ಷದಿಂದ ಮಾನಸಿಕವಾಗಿ ದೂರ ಉಳಿದಿದ್ದರು. ಮುಖ್ಯಮಂತ್ರಿಗಳ ವಿರುದ್ಧ ಪ್ರಸಾದ್ ವಾಗ್ದಾಳಿ ನಡೆಸಿದ್ದರು.
Next Story